Kannada NewsLatest
ಅಂಗಡಿ ಅಭಿಮಾನಿಗಳ ಸಂಭ್ರಮ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಸಂಸದ ಸುರೇಶ ಅಂಗಡಿ ಅವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ಸಿಗಲಿದೆ ಎನ್ನುವ ಸುದ್ದಿ ಬರುತ್ತಿದ್ದಂತೆ ಬಾವರ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ಚನ್ನಮ್ಮ ವೃತ್ತದ ಮಹಾಗಣಪತಿ ದೇವಸ್ಥಾನದಲ್ಲಿ ಶಾಸಕ ಅನಿಲ ಬೆನಕೆ ನೇತೃತ್ವದಲ್ಲಿ ಪೂಜೆ ಸಲ್ಲಿಸಿದ್ದಲ್ಲದೆ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಅಂಗಡಿ ಮನೆಯ ಎದುರೂ ಪಟಾಕಿ ಸಿಡಿಸಿ, ಸಿಹಿ ಹಂಚಲಾಯಿತು. ನರೇಂದ್ರ ಮೋದಿ ಸಂಪುಟ ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಬಿಜೆಪಿ ವತಿಯಿಂದ ಪೂಜೆ ಹಮ್ಮಿಕೊಳ್ಳಲಾಗಿದೆ.



