Latest

ಅಪಘಾತ: ಗ್ರಾಪಂ ಸಿಬ್ಬಂದಿ ಸಾವು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಹೆದ್ದಾರಿ ಪಕ್ಕದ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ಸವಾರ ಸಾವಿಗೀಡಾಗಿದ್ದಾರೆ.

ಚನ್ನಮ್ಮ ಕಿತ್ತೂರು ತಾಲೂಕಿನ ಹುಣಶೀಕಟ್ಟಿ ಗ್ರಾಮದ ಗ್ರಾಪಂ ಕ್ಲರ್ಕ್ ಸುಭಾಷ್ ನಿಂಗಪ್ಪ ವಣ್ಣೂರ(40) ಮೃತ ಬೈಕ್ ಸವಾರ.

ಬೆಳಗಾವಿಯ ಎಂ.ಕೆ.ಹುಬ್ಬಳ್ಳಿ ಬಳಿ ಪುಣಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ಅಪಘಾತ ನಡೆದಿದೆ.

ಗಂಭೀರ ಗಾಯಗೊಂಡ ಅವರನ್ನು ಬೆಳಗಾವಿ ಜಿಲ್ಲಾಸ್ಫತ್ರೆಗೆ ಸಾಗಿಸಲಾಗಿತ್ತರಾದರೂ, ತಡರಾತ್ರಿ ಚಿಕಿತ್ಸೆ ಫಲಿಸದೇ ಸಾವಿಗೀಡಾದರು.

ಹೆದ್ದಾಯಲ್ಲಿರುವ ಅವೈಜ್ಞಾನಿಕ ಲೈನ್ ಗಳು ಅಪಘಾತಗಳಿಗೆ ಕಾರಣವಾಗುತ್ತಿವೆ ಎಂದು ಹೆದ್ದಾರಿ ಪ್ರಾಧಿಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button