Latest

ಕಾರಿನಲ್ಲೇ ಶೂಟ್ ಮಾಡಿಕೊಂಡು ಆತ್ಮಹತ್ಯೆ

ಪ್ರಗತಿವಾಹಿನಿ ಸುದ್ದಿ, ಹಳಿಯಾಳ
ಕಾರಿನೊಳಗೆ ಶೂಟ್ ಮಾಡಿಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಕೆಸರೊಳ್ಳಿ ಗ್ರಾಮದ ಬಳಿ ನಡೆದಿದೆ.
ಮಂಜುನಾಥ್(೩೯) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಈತ ಮೈಸೂರು ಜಿಲ್ಲೆಯ ಟೀ ನರಸೀಪುರ ತಾಲೂಕಿನ ಕಾರವಳ್ಳಿ ಗ್ರಾಮದವನು. ರಾತ್ರಿ ವೇಳೆ ಕಾರ್ ನೊಳಗೆ ಕುಳಿತು ಶೂಟ್ ಮಾಡಿಕೊಂಡಿದ್ದು ಕಾರಣ ಆತ್ಮಹತ್ಯೆಗೆ ತಿಳಿದು ಬಂದಿಲ್ಲ.
ಆತ್ಮಹತ್ಯೆ ಮಾಡಿಕೊಂಡಿರುವುದನ್ನ ಗಮನಿಸಿದ ಗ್ರಾಮಸ್ಥರು  ಪೊಲೀಸರಿಗೆ ಮಾಹಿತಿ ನೀಡಿದ್ದು ಹಳಿಯಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
 

Related Articles

Back to top button