Latest

5 ಬಸ್ ಗಳಿಗೆ ಬೆಂಕಿ ಹಚ್ಚಿದ ಬಸ್ ಚಾಲಕ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಕೊರೊನಾ ಸಂಕಷ್ಟದಿಂದ ಕಂಗೆಟ್ಟಿದ್ದರೂ ಸಂಬಳ ನೀಡದೇ ಸತಾಯಿಸಿದ್ದಕ್ಕೆ ಮಾಲೀಕನ ವಿರುದ್ಧ ಕೋಪಗೊಂಡ ಬಸ್ ಚಾಲಕನೊಬ್ಬ 5 ಬಸ್ ಗಳಿಗೆ ಬೆಂಕಿ ಹಚ್ಚಿರುವ ಘಟನೆ ಮುಂಬೈನಲ್ಲಿ ನಡೆದಿದೆ.

ಆರೋಪಿ ಬಸ್ ಚಾಲಕ 24 ವರ್ಷದ ಅಜಯ್ ನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಆತ್ಮಾರಾಂ ಟ್ರ್ಯಾವಲ್ಸ್ ಬಸ್ ನ 5 ಬಸ್ ಗಳು ಬೆಂಕಿಗಾಹುತಿಯಾಗಿದ್ದವು. ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಇದೀಗ ಸತ್ಯಬಯಲಾಗಿದೆ.

Home add -Advt

2020ರ ಡಿಸೆಂಬರ್ ನಲ್ಲಿ ಮೂರು ಬಸ್ ಗಳು ಹಾಗೂ 2021ರ ಜನವರಿ 21ರಂದು ಎರಡು ಬಸ್ ಗಳಿಗೆ ಬೆಂಕಿ ಹಚ್ಚಲಾಗಿದ್ದು, ಬಸ್ ಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದವು. ಅನುಮಾನಗೊಂಡ ಪೊಲೀಸರು ಆರಂಭದಲ್ಲಿ ಟ್ರಾವಲ್ ಏಜನ್ಸಿ ಮಾಲೀಕನನ್ನು ವಿಚಾರಣೆ ನಡೆಸಿದ್ದರು.

ಅಂತಿಮವಾಗಿ ಬಸ್ ಚಾಲಕನನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಕೊರೊನಾ ಸಮಯದಲ್ಲಿ ತಾತ್ಕಾಲಿಕವಾಗಿ ಬಸ್ ಚಾಲಕನಾಗಿ ನೇಮಕಗೊಂಡಿದ್ದ ಅಜಯ್, ಗೋವಾದ ಬಳಿ ಬಸ್ ಚಲಾಯಿಸುತ್ತಿದ್ದಾಗ ಅಪಘಾತವಾಗಿತ್ತು. ಹೀಗಾಗಿ ಬಸ್ ಮಾಲೀಕ ಅಜಯ್ ಗೆ ಸಂಬಳ ನೀಡಿರಲಿಲ್ಲ. ಇದರಿಂದ ಕೋಪಗೊಂಡ ಅಜಯ್ ಬಸ್ ಗಳಿಗೆ ಬೆಂಕಿಯಿಟ್ಟಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ಆಕಾಶವಾಣಿ ಕೇಂದ್ರದಲ್ಲಿ ಬೆಂಕಿ

ಅಕ್ರಮವಾಗಿ ಬಂದೂಕು ಇಟ್ಟುಕೊಂಡಿದ್ದ ಆರೋಪಿಗಳ ಬಂಧನ

Related Articles

Back to top button