
ಪ್ರಗತಿವಾಹಿನಿ ಸುದ್ದಿ, ಅಗಸಗಿ :
ಬಿಜೆಪಿ ಬೆಳಗಾವಿ ನಗರದ ಕಾರ್ಯಕರ್ತರೊಬ್ಬರು ತಲವಾರ್ ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿ ಬಂಧನಕ್ಕೊಳಗಾದ ಬೆನ್ನಲ್ಲೇ ಹುಕ್ಕೆರಿ ತಾಲೂಕಿನ ಇಸ್ಲಾಂಪುರ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರು ಸಹ ತಮ್ಮ ಹುಟ್ಟುಹಬ್ಬದ ವೇಳೆ ತಲವಾರ್ ನಿಂದ ಕೇಕ್ ಕತ್ತರಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತೆಯಾಗಿರುವ ಅಮಿರಾ ದೇಸಾಯಿ ಶುಕ್ರವಾರ ರಾತ್ರಿ ತಲವಾರನಿಂದ ಕೆಕ್ ಕತ್ತರಿಸಿ ಪೋಸ್ ಕೊಟ್ಟು ತಮ್ಮ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ ಎನ್ನಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹರಿದಾಡುತ್ತಿದೆ.
ಇದೇ ವೇಳೆ ಅವರು ಈ ಹಿಂದೆ ಕಾರ್ಯಕ್ರಮವೊಂದರಲ್ಲಿ ಮಾಡಿದ್ದರೆನ್ನಲಾದ ನೃತ್ಯದ ವೀಡಿಯೋ ಸಹ ಸಾಮಾಜಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಅಮಿರಾ ದೇಸಾಯಿ ಗ್ರಾಮದಲ್ಲಿ ರಾಜಕೀಯ ಪ್ರಭಾವ ಹೊಂದಿದ್ದು ಸಚಿವ ಸತೀಶ್ ಜಾರಕಿಹೊಳಿ ಬೆಂಬಲಿಗರೆನ್ನಲಾಗಿದೆ. ಈ ಬಗ್ಗೆ ಪೊಲೀಸರು ಏನು ಕ್ರಮ ತೆಗೆದುಕೊಳ್ಳುತ್ತಾರೆ ಕಾದು ನೋಡಬೇಕಿದೆ.