Latest
ದಕ್ಷಿಣ ಕರ್ನಾಟಕದ ಬಜೆಟ್ -ಅಭಯ ಪಾಟೀಲ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಡಿಸಿದ ಬಜೆಟ್ ಕೇವಲ ಮಂಡ್ಯ, ಹಾಸನ, ಮೈಸೂರು ಮುಂತಾದ ದಕ್ಷಿಣ ಕರ್ನಾಟಕಕ್ಕೆ ಸೀಮಿತವಾದ ಬಜೆಟ್ ಆಗಿದ್ದು, ಉತ್ತರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗಿದೆ ಎಂದು ಶಾಸಕ ಅಭಯ ಪಾಟೀಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಜೆಟ್ ನಲ್ಲಿ ಹೊಸದಾದ ಯಾವ ಅಂಶಗಳೂ ಇಲ್ಲ. ಒಂದು ರೀತಿಯಲ್ಲಿ ಕಾಟಾಚಾರದ ಬಜೆಟ್ ಆಗಿದೆ. ಉತ್ತರ ಕರ್ನಾಟಕ ಭಾಗವನ್ನಂತೂ ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ ಎಂದು ಅವರು ಹೇಳಿದ್ದಾರೆ.




