ಪ್ರಗತಿವಾಹಿನಿ ಸುದ್ದಿ, ನವದೆಹಲಿ
ಉತ್ತರ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ನಕಲಿ ಮದ್ಯ ಸೇವಿಸಿ ನಿರಂತರವಾಗಿ ಜನರು ಸಾವಿಗೀಡಾಗುತ್ತಿದ್ದು, ಸತ್ತವರ ಸಂಖ್ಯೆ 72ಕ್ಕೇರಿದೆ.
ಉತ್ತರಾಖಂಡದಲ್ಲಿ 28 ಜನ, ಪಶ್ಚಿಮ ಉತ್ತರ ಪ್ರದೇಶದದಲ್ಲಿ 36 ಜನ, ಕುಷಿನಗರದಲ್ಲಿ 8 ಜನ ಸಾವನ್ನಪ್ಪಿದ್ದಾರೆ. ಇನ್ನೂ 50 ಜನರ ಸ್ಥಿತಿ ಗಂಭೀರವಾಗಿದೆ. ಘಟನೆ ಸಂಬಂಧ ಕುಷಿನಗರ ಜಿಲ್ಲೆಯಲ್ಲಿ 9 ಮಂದಿಯನ್ನು ಬಂಧಿಸಲಾಗಿದೆ. ಅಬಕಾರಿ ಇಲಾಖೆಯ 13 ಅಧಿಕಾರಿಗಳನ್ನು ವಜಾ ಮಾಡಲಾಗಿದೆ. ಮದ್ಯ ದುರಂತದ ಬಗ್ಗೆ ತನಿಖೆಗೆ ಆದೇಶಿಸಲಾಗಿದ್ದು, ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.