Kannada NewsKarnataka NewsLatest
*BREAKING: ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್: ಜಾಮೀನು ಮಂಜೂರು*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹೋರಾಟಗಾರ ಮಹೇಶ್ ತಿಮರೋಡಿಗೆ ಜಾಮೀನು ಮಂಜೂರು ಮಾಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಬ್ರಹ್ಮಾವರ ಠಾಣೆ ಪೊಲೀಸರಿಂದ ಬಂಧನಕ್ಕೀಡಾಗಿದ್ದ ಮಹೇಶ್ ತಿಮರೋಡಿಗೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಸಂಚಾರಿ ಪೀಠ, ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಎರಡು ದಿನಗಳ್ ಹಿಂದೆ ಮಹೇಶ್ ತಿಮರೋಡಿಯನ್ನು ಉಜಿರೆ ನಿವಾಸದಲ್ಲಿ ಪೊಲೀಸರು ಬಂಧಿಸಿದ್ದರು.




