Kannada NewsLatestNational
*ಭೀಕರ ರಸ್ತೆ ಅಪಘಾತ; 7 ಜನರು ಸ್ಥಳದಲ್ಲೇ ದುರ್ಮರಣ*
![](https://pragativahini.com/wp-content/uploads/2022/07/Accident.jpg)
ಪ್ರಗತಿವಾಹಿನಿ ಸುದ್ದಿ: ಖಾಸಗಿ ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ನಲ್ಲೂರು ಬಳಿ ನಡೆದಿದೆ.
ಮುಸೂರು ಟೋಲ್ ಪ್ಲಾಜಾ ಬಳಿ ಈ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ 7 ಜನರು ಸಾವನ್ನಪ್ಪಿದ್ದಾರೆ. 15 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.