ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ
ವಿಶ್ವ ಹಿಂದು ಪರಿಷತ್ತಿನ ಉತ್ತರ ಕರ್ನಾಟಕದ ಪ್ರಾಂತ ಕಾರ್ಯಾಲಯದ ಭೂಮಿ ಪೂಜೆ ಭಾನುವಾರ ಹುಬ್ಬಳ್ಳಿಯಲ್ಲಿ ನಡೆಯಿತು.
ಹುಬ್ಬಳ್ಳಿಯ ಶಿರೂರ ಪಾರ್ಕನ ಅಯ್ಯಪ್ಪ ದೇವಸ್ಥಾನದ ಸಮೀಪದಲ್ಲಿ ಪ್ರೇರಣಾ ಸೇವಾ ಸಂಸ್ಥೆ, ವಿಶ್ವ ಹಿಂದು ಪರಿಷತ್ತಿನ ಉತ್ತರ ಕರ್ನಾಟಕದ ಪ್ರಾಂತ ಕಾರ್ಯಾಲಯವನ್ನು ನಿರ್ಮಿಸುವ ಸಲುವಾಗಿ ಭೂಮಿ ಪೂಜೆಯನ್ನು ನೆರವೇರಿಸಲಾಯಿತು.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ, ಶಾಸಕ ಅನಿಲ ಬೆನಕೆ, ಶಾಸಕ ಪ್ರಭು ಚೌಹಾಣ, ವಿಶ್ವಹಿಂದೂ ಪರಿಷತ್ ಮುಖಂಡ ರಾಘವೇಂದ್ರ ಕಾಗವಾಡಜಿ, ವಿಶ್ವ ಹಿಂದು ಪರಿಷತ್ ಸಂಘಟನಾ ಕಾರ್ಯದರ್ಶಿ ಗೋಪಾಲ ಹಾಗೂ ಇತರ ಮುಖಂಡರುಗಳು ಉಪಸ್ಥಿತರಿದ್ದರು