Latest

ಶಿವಳ್ಳಿ ಅಂತ್ಯಕ್ರಿಯೆ: ನಾಳೆ ಧಾರವಾಡ ಜಿಲ್ಲೆಯಲ್ಲಿ ಸರಕಾರಿ ರಜೆ

ಪ್ರಗತಿವಾಹಿನಿ ಸುದ್ದಿ, ಧಾರವಾಡ

ಸಚಿವ ಸಿ.ಎಸ್.ಶಿವಳ್ಳಿ ನಿಧನದ ಹಿನ್ನೆಲೆಯಲ್ಲಿ ಶನಿವಾರ ಧಾರವಾಡ ಜಿಲ್ಲೆಯಾದ್ಯಂತ ಸರಕಾರಿ ರಜೆ ಘೋಷಿಸಲಾಗಿದೆ. ಸರಕಾರಿ ಕಚೇರಿಗಳು ಮತ್ತು ಶಾಲೆ ಕಾಲೇಜಿಗೆ ರಜೆ ಘೋಷಿಸಲಾಗಿದ್ದು, 3 ದಿನ ಶೋಖಾಚರಣೆ ಘೋಷಿಸಲಾಗಿದೆ.

Home add -Advt

ಶನಿವಾರ ಶಿವಳ್ಳಿ ಅವರ ಅಂತ್ಯಕ್ರಿಯೆ ಕುಂದಗೋಳ ಸಮೀಪ ಯರಗುಪ್ಪಿಯ ರುದ್ರಭೂಮಿಯಲ್ಲಿ ನಡೆಯಲಿದೆ. 

ಇಂದು ಸಂಜೆಯವರೆಗೆ ಜೆಪಿ ನಗರದ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇಟ್ಟು , ಸಂಜೆ 6 ಗಂಟೆಗೆ ಕುಂದಗೋಳಕ್ಕೆ ಪಾರ್ಥಿವ ಶರೀರ ಒಯ್ಯಲಾಗುವುದು. ರಾತ್ರಿ ಅವರ ಹುಟ್ಟೂರಿಗೆ ಒಯ್ದು ನಾಳೆ ಅಂತಿಮ ಸಂಸ್ಕಾರ ನಡೆಸಲಾಗುವುದು. 

ಶಿವಳ್ಳಿ ನಿಧನಕ್ಕೆ ಮುಖ್ಯಮಂತ್ರಿ ಸೇರಿದಂತೆ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. 

ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ನಿಧನ

Related Articles

Back to top button