Latest

ಶೀಘ್ರ ಕೋರೆ ನೇತೃತ್ವದಲ್ಲಿ ಮಹಾರಾಷ್ಟ್ರ ಸಿಎಂ ಭೇಟಿ -ಕವಟಗಿಮಠ

ಪ್ರಗತಿ ಮೀಡಿಯಾ ಹೌಸ್, ಬೆಳಗಾವಿ

ಕೃಷ್ಣಾ ನದಿ ಬತ್ತಿರುವುದರಿಂದ ಬೆಳಗಾವಿ, ವಿಜಯಪುರ, ಬಾಗಲಕೋಟೆ ಪ್ರದೇಶದಲ್ಲಿ ನೀರಿಗೆ ಹಾಹಾಕಾರ ಉಂಟಾಗಿರುವ ಹಿನ್ನೆಲೆಯಲ್ಲಿ ಶೀಘ್ರವೇ ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ ನೇತೃತ್ವದಲ್ಲಿ ಈ ಭಾಗದ ಶಾಸಕರ ನಿಯೋಗವನ್ನು ಮಹಾರಾಷ್ಟ್ರಕ್ಕೆ ಕೊಂಡೊಯ್ಯಲಾಗುವುದು ಎಂದು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಮಹಾತೇಶ ಕವಟಗಿಮಠ ತಿಳಸಿದ್ದಾರೆ.

Home add -Advt

ಶನಿವಾರ ರಾಜ್ಯದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ ಅವರನ್ನು ಭೇಟಿಯಾದ ಕವಟಗಿಮಠ ಪರಿಸ್ಥಿತಿಯನ್ನು ವಿವರಿಸಿದರು. ರಾಜ್ಯ ಸರಕಾರದಿಂದ ಮಹಾರಾಷ್ಟ್ರಕ್ಕೆ ಮನವಿ ಸಲ್ಲಿಸಲಾಗಿದೆ. ಅಲ್ಲಿನ ಕಾರ್ಯದರ್ಶಿ ಕಡವನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಿದ್ದಾರೆ ಎಂದು ವಿಜಯ ಭಾಸ್ಕರ ತಿಳಿಸಿದರು. 

ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಭೇಟಿ ಮಾಡಿ ಕಡತಕ್ಕೆ ಅನುಮೋದನೆ ನೀಡುವಂತೆ ಒತ್ತಾಯಿಸಲಾಗುವುದು ಎಂದು ಕವಟಗಿಮಠ ತಿಳಿಸಿದ್ದಾರೆ. 

ಕೊಯ್ನಾದಿಂದ ನೀರು: ಮಹಾ ಸಿಎಂಗೆ ವೆಂಕಯ್ಯ ನಾಯ್ಡು ಸೂಚನೆ -ಕೋರೆ ಮಾಹಿತಿ

Related Articles

Back to top button