Latest

ಸುರೇಶ ಅಂಗಡಿ ದೂರು; ಸಾಧುನವರ್ ಗೆ ನೋಟೀಸ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

Home add -Advt

ತಮ್ಮ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬರಹ ಹಾಕಲಾಗಿದೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಅಂಗಡಿ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

ಸಾಧುನವರ್ ಅಭಿಮಾನಿಗಳ ಬಳಗ ಮತ್ತು ಸಾಧುನವರ್ ಯುಥ್ ಬ್ರಿಗೇಡ್ ಹೆಸರಲ್ಲಿನ ಫೇಸ್‌ಬುಕ್‌ ಪೇಜ್ ನಲ್ಲಿ ತಮ್ಮ ಬಗ್ಗೆ ಹಾಗೂ ಬಿಜೆಪಿ ಸ್ಟಾರ್ ಪ್ರಚಾರಕಿ ಮಾಳವಿಕ ವಿರುದ್ಧ ಅವಹೇಳನಕಾರಿ ಬರಹ ಹಾಕಲಾಗಿದೆ. ಮತ್ತು ಫೋಟೊ ಕೂಡ ಬಳಸಲಾಗಿದೆ ಎಂದು ದೂರಲಾಗಿದೆ.

ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಸಾಧುನವರ್ ಗೆ ನೋಟೀಸ್ ಜಾರಿ ಮಾಡಿದ್ದು, ತಕ್ಷಣ ವಿವರಣೆ ನೀಡುವಂತೆ ಸೂಚಿಸಿದ್ದಾರೆ. ಉತ್ತರಿಸದಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಲಾಗಿದೆ.

Related Articles

Back to top button