Election NewsKannada NewsKarnataka NewsNationalPolitics
ಅಮಿತ್ಶಾರನ್ನು ಭೇಟಿ ಮಾಡಿದ ನೇಹಾ ಕುಟುಂಬ

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ಶಾರನ್ನು ನೇಹಾ ಕುಟುಂಬಸ್ಥರು ಭೇಟಿ ಮಾಡಿ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದಾರೆ. ಲೋಕಸಭಾ ಚುನಾವಣಾ ಪ್ರಚಾರಕ್ಕೆ ಹುಬ್ಬಳ್ಳಿಗೆ ಬಂದಿದ್ದ ವೇಳೆ ಭೇಟಿ ಮಾಡಿದರು.
ರಾಜ್ಯ ವಿಧಾನ ಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ನೇಹಾ ತಂದೆ ನಿರಂಜನ, ತಾಯಿ ಗೀತಾ, ಸಹೋದರ ನಿಹಾಲ್ ಭೇಟಿ ಮಾಡಿ, ನಮಗೆ ನ್ಯಾಯ ಕೊಡಿಸಿ ಎಂದು ಕೇಳಿದರು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಶಾಸಕ ಮಹೇಶ್ ಟೆಂಗಿನಕಾಯಿ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.



