Karnataka NewsLatestPolitics
*ಸಿಎಂ ಸಿದ್ದರಾಮಯ್ಯ ಜೊತೆ ದೆಹಲಿ ಕನ್ನಡ ಭವನದಲ್ಲಿ ಉಪಹಾರ ಸೇವಿಸಿದ ಸಚಿವರು*


ಪ್ರಗತಿವಾಹಿನಿ ಸುದ್ದಿ: ಹೈಕಮಾಂಡ್ ಬುಲಾವ್ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದು, ಸಿಎಂ, ಡಿಸಿಎಂ ಬೆನ್ನಲ್ಲೇ ಕೆಲ ಸಚಿವರು, ಶಾಸಕರು ಕೂಡ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ.
ದೆಹಲಿಯ ಕನ್ನಡ ಭವನದಲ್ಲಿ ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರೊಂದಿಗೆ ಉಪಹಾರ ಸೇವಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ ಪೊನ್ನಣ್ಣ ಸೇರಿ ಹಲವು ಪ್ರಮುಖರ ಜೊತೆಗೆ ದೆಹಲಿಯ ಕನ್ನಡ ಭವನದಲ್ಲಿ ಬೆಳಗಿನ ಉಪಹಾರ ಸವಿದರು.




