Latest

ಉತ್ತರ ಕರ್ನಾಟಕದಲ್ಲಿ ಎಲ್ಲೂ ಕಾಂಗ್ರೆಸ್ ಬರಲ್ಲ -ಕೋರೆ

 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಉತ್ತರಕರ್ನಾಟಕದ ಯಾವುದೇ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದಿಲ್ಲ ಎಂದು ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಹೇಳಿದರು.

ಬೆಳಗಾವಿಯಲ್ಲಿ ಇಂದು ಸರೇಶ ಅಂಗಡಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಪ್ರಭಾಕರ ಕೋರೆ ಮಾತನಾಡಿ, ರಾಜ್ಯದಲ್ಲಿ 20ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಗೆಲುವು ಕಾಣುತ್ತದೆ. ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಯಾವುದೇ ಕ್ಷೇತ್ರದಲ್ಲಿ ಗೆಲುವುದಿಲ್ಲ ಎಂದರು.

 

ರಾಜ್ಯದ ಬಹಳ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಗಳು ಸಿಕ್ಕಿಲ್ಲ. ಈ ಬಾರಿ ದೇಶದ ಯುವಕರಿಂದ ಹಿಡಿದು ಎಲ್ಲರೂ ಮೋದಿಗೆ ಬೆಂಬಲಿಸುತ್ತಿದ್ದಾರೆ ಎಂದರು.

ಸುರೇಶ ಅಂಗಡಿ ನಾಮಪತ್ರ ಸಲ್ಲಿಸಲು ಅದ್ಧೂರಿ ರ್ಯಾಲಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button