ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಪ್ರಧಾನಿ ನರೇಂದ್ರ ಮೋದಿ ಏ.8ರಂದು ರಾಜ್ಯದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಅಂದು ಬೆಳಿಗ್ಗೆ ಮೈಸೂರಿನಲ್ಲಿ, ಸಂಜೆ ಚಿತ್ರದುರ್ಗದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ಅವರು ಮಾ.31ರಂದು ಬೆಳಿಗ್ಗೆ 12 ಗಂಟೆಗೆ ಕೊಡಗಿನ ಗೋಣಿಕೊಪ್ಪಲುನಲ್ಲಿ, ಸಂಜೆ 4ಕ್ಕೆ ಕೋಲಾರದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಕೋಲಾರದಲ್ಲಿ ಸಂಜೆ 5ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ‘ನಾನೂ ಚೌಕಿದಾರ’ ಅಭಿಯಾನದಡಿ ದೇಶಾದ್ಯಂತ ಚೌಕಿದಾರರನ್ನುದ್ದೇಶಿಸಿ ಮಾತನಾಡುವ ಸಂವಾದ ಕಾರ್ಯಕ್ರಮದಲ್ಲಿ ಸ್ಮೃತಿ ಇರಾನಿ ಪಾಲ್ಗೊಳ್ಳಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ