Kannada NewsKarnataka NewsLatestPolitics

*ಚಲಿಸುತ್ತಿದ್ದ ರೈಲಿನಿಂದ ನದಿಗೆ ಹಾರಿ ಯುವತಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಯುವತಿಯೊಬ್ಬಳು ಚಲಿಸುತ್ತಿದ್ದ ರೈಲಿನಿಂದಲೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ.

ಎಂ.ಜಿ.ನಯನಾ (27) ಆತ್ಮಹತ್ಯೆಗೆ ಶರಣಾಗಿರುವ ಯುವತಿ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಗೇಶಿಯ ಪಡಸಾಲೆಹಟ್ಟಿ ನಿವಾಸಿ. ಯುವತಿ ಆತ್ಮಹಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Home add -Advt

ಯುವತಿ ತನ್ನ ಬ್ಯಾಗ್ ನ್ನು ರೈಲಿನಲ್ಲಿ ತಾನು ಕುಳಿತಿದ್ದ ಸೀಟ್ ನಲ್ಲಿಯೇ ಬಿಟ್ಟಿದ್ದು, ನೇತ್ರಾವತಿ ನದಿಯ ರೈಲ್ವೆ ಬ್ರಿಡ್ಜ್ ಮೇಲಿನಿಂದ ನದಿಗೆ ಹಾರಿದ್ದಾಳೆ. ರೈಲಿನಲ್ಲಿದ್ದ ಯುವತಿ ಬ್ಯಾಗ್ ಹಾಗೂ ಅದರಲ್ಲಿದ್ದ ಕೆಲ ದಾಖಲೆಗಳಿಂದ ಯುವತಿ ತುಮಕೂರು ಮೂಲದವಳು ಎಂದು ತಿಳಿದುಬಂದಿದೆ.

ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಸ್ಥಳಕ್ಕೆ ಧಾವಿಸಿ ಯುವತಿಯ ಶವ ಮೇಲೆತ್ತುವ ಕಾರ್ಯಾಚರಣೆ ಆರಂಭಿಸಿದ್ದಾರೆ. ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button