Latest

ಕಾಂಗ್ರೆಸ್ ರಸ್ತೆ ಅವ್ಯವಸ್ಥೆಗೆ ಯುವಕ ಬಲಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಕಾಂಗ್ರೆಸ್ ರಸ್ತೆ ಸಂಚಾರ ಅವ್ಯವಸ್ಥೆಗೆ ಯುವಕನೋರ್ವ ಬಲಿಯಾಗಿದ್ದಾನೆ.

ಬುಧವಾರ ಸಂಜೆ ಬೈಕ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ರಸ್ತೆ ಮೇಲ್ದರ್ಜೆಗೇರಿಸುವ ಕೆಲಸ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರತಿನಿತ್ಯ ಸಣ್ಣ ಪುಟ್ಟ ಅಪಘಾತಗಳು ಸಂಭವಿಸುತ್ತಲೇ ಇವೆ. ಸಂಚಾರ ದಟ್ಟಣೆ ಸಂದರ್ಭದಲ್ಲೂ ಪೊಲೀಸರು ಇರುವುದಿಲ್ಲ ಎನ್ನುವ ಆರೋಪಗಳಿವೆ.  ಸಂಚಾರಿ ಪೊಲೀಸರು ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕಿದೆ.

Home add -Advt

Related Articles

Back to top button