Latest

ಕಿತ್ತೂರಿಗೆ ಸಿಎಂ ಆಗಮನ: ಹೆಲಿಕಾಪ್ಟರ್ ತಪಾಸಣೆ

ಪ್ರಗತಿವಾಹಿನಿ ಸುದ್ದಿ, ಕಿತ್ತೂರು
ಉತ್ತರ ಕನ್ನಡ ಜಿಲ್ಲೆಯ ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರ ಪ್ರಚಾರಕ್ಕೆಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿತ್ತೂರಿಗೆ ಆಗಮಿಸಿದ್ದಾರೆ.
ಹೆಲಿಕಾಪ್ಟರ್ ಮೂಲಕ ಕಿತ್ತೂರಿಗೆ ಆಗಮಿಸಿದ ಸಿಎಂ ಅಲ್ಲಿಂದ ಎಂ.ಕೆ.ಹುಬ್ಬಳ್ಳಿಗೆ ತೆರಳಿದರು. ಈ ವೇಳೆ ಮಾತನಾಡಿದ ಅವರು, ಮಾಧ್ಯಮದವರೆ ನನ್ನ ವಿರೋಧಿಗಳು ಎಂದು ಕಿಡಿಕಾರಿದರು. ಮಂಡ್ಯದಲ್ಲಿ 3 ಲಕ್ಷ  ಮತಗಳ ಅಂತರದಿಂದ ಗೆಲವು ನಿಶ್ಚಿತ  ಎಂದು ಅವರು ಹೇಳಿದರು. ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಜೊತೆಗಿದ್ದರು.
ಇದೇ ವೇಳೆ ಚುನಾವಣಾಧಿಕಾರಿಗಳು ಹೆಲಿಕಾಪ್ಟರ್ ತಪಾಸಣೆ ನಡೆಸಿದರು. 

Related Articles

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button