Latest

ಗೆಲುವಿಗಾಗಿ ಅನಂತ್ ಕುಮಾರ್ ಹೆಗಡೆಯಿಂದ ವಿಶೇಷ ಪೂಜೆ

ಪ್ರಗತಿವಾಹಿನಿ ಸುದ್ದಿ, ಶಿರಸಿ

ಉತ್ತರ ಕನ್ನಡ ಜಿಲ್ಲೆ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ
ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ ಕುಮಾರ್ ಹೆಗಡೆ ಕುಟುಂಬ ಸಮೇತರಾಗಿ ಶಿರಸಿಯ ಮಾರಿಕಾಂಬಾ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಏಪ್ರಿಲ್ ೨ ರಂದು ನಾಮ ಪತ್ರ ಸಲ್ಲಿಕೆ ಹಿನ್ನಲೆಯಲ್ಲಿ ಪತ್ನಿ ರೂಪಾ ಹೆಗಡೆ ಹಾಗೂ ಮಕ್ಕಳೊಂದಿಗೆ ಆಗಮಿಸಿ ದಕ್ಷಿಣ ಭಾರತದ ಪ್ರಸಿದ್ಧ ಶಕ್ತಿ ದೇವತೆಗೆ ವಿಶೇಷ ಪೂಜೆ ಸಲ್ಲಿಸಿದರು.

ನಾಳೆ ಬೆಳಿಗ್ಗೆ ಕಾರವಾರ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅನಂತ ಕುಮಾರ್ ಹೆಗಡೆ ನಾಮಪತ್ರ ಸಲ್ಲಿಸಿದ್ದಾರೆ.

ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು ಈ ಚುನಾವಣೆ ಪ್ರಜಾತಂತ್ರದ ವಿಶಿಷ್ಟ ಚುನಾವಣೆ. ದೇಶಕ್ಕೆ ಹೊಸ ದಿಕ್ಕು ಸಿಕ್ಕುತ್ತಿರುವ ಚುನಾವಣೆ. ರಾಷ್ಟ್ರೀಯ ಅಸ್ಮಿತೆ ಆಧಾರದ ಮೇಲೆ ಭವ್ಯ ರಾಷ್ಟ್ರ ನಿರ್ಮಾಣದ ಸಂಕಲ್ಪದೊಂದಿಗೆ ಹೊಸ ಹೆಜ್ಜೆ ಇಡ್ತಾ ಇದ್ದೀವಿ. ಈ ಕ್ಷೇತ್ರದ ಜನರ ಆಶೀರ್ವಾದ ಇರಲಿ ಎನ್ನುವ ಬೇಡಿಕೆ ಮತ್ತು ಉತ್ತರಕನ್ನಡದಲ್ಲಿ ಹೆಚ್ಚಿನ ಬಹುಮತದೊಂದಿಗೆ ಬಿಜೆಪಿ ಆಯ್ಕೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಕೇಂದ್ರದಲ್ಲೂ ನಿಶ್ಚಿತವಾಗಿ ಮೆಜಾರಿಟಿಯಿಂದ ಬಿಜೆಪಿ ಬರುತ್ತದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button