Latest

ಚುನಾವಣೆ ಪ್ರಚಾರಕ್ಕೆ ತೆರಳಿದ್ದ 7 ಜನ ಮಸಣಕ್ಕೆ

ಪ್ರಗತಿವಾಹಿನಿ ಸುದ್ದಿ, ಗಡಹಿಂಗ್ಲಜ

ಮಹಾರಾಷ್ಟ್ರದ ಗಡಹಿಂಗ್ಲಜ ಬಳಿ ಬಸ್ ಮತ್ತು ಟ್ರ್ಯಾಕ್ಸ್ ಮಧ್ಯೆ ಡಿಕ್ಕಿ ಸಂಭವಿಸಿ 7 ಜನರು ಸಾವಿಗೀಡಾಗಿದ್ದಾರೆ.

ಲೋಕಸಭಾ ಚುನಾವಣೆ ಪ್ರಚಾರಕ್ಕೆಂದು ಟ್ರ್ಯಾಕ್ಸ್ ನಲ್ಲಿ ಹೋಗಿ ವಾಪಸ್ಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.  ಮಹಾರಾಷ್ಟ್ರ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಗೆ ಟ್ರ್ಯಾಕ್ಸ್ ಡಿಕ್ಕಿ ಹೊಡೆದಿದೆ. ಟ್ರ್ಯಾಕ್ಸನಲ್ಲಿ 15ಕ್ಕೂ ಹೆಚ್ಚು ಜನರನ್ನು ತುಂಬಲಾಗಿತ್ತು. 8 ಜನ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಗಡಹಿಂಗ್ಲಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

ಚುನಾವಣೆ ಪ್ರಚಾರಕ್ಕೆ ಗಡಿ ಭಾಗದಲ್ಲಿ ಕುರಿಗಳನ್ನು ತುಂಬಿದಂತೆ ಜನರನ್ನು ತುಂಬಿಕೊಡು ಹೋಗುತ್ತಿರುವುದು ಸಾಮಾನ್ಯವಾಗಿದೆ. ಅಲ್ಲದೆ, ಅದರಲ್ಲಿದ್ದವರಲ್ಲಿ ಜೋಶ್ ಮಿತಿಮೀರಿ ಅವಘಡಕ್ಕೆ ಕಾರಣವಾಗುತ್ತಿದೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button