Latest

*ನಾ ನಾಯಕಿ ಸಮಾವೇಶಕ್ಕೆ ಸಿಎಂ ಬೊಮ್ಮಾಯಿ ವ್ಯಂಗ್ಯ*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಆಯೋಜಿಸಿರುವ ಮಹಿಳಾ ಸಮಾವೇಶದ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಪ್ರಿಯಾಂಕಾ ಗಾಂಧಿ ರಾಜ್ಯಕ್ಕೆ ಆಗಮಿಸುವ ಬಗ್ಗೆ ನಮ್ಮ ತಕರಾರಿಲ್ಲ. ಅವರು ಬರಲಿ. ಕಾಂಗ್ರೆಸ್ ಕಾರ್ಯಕ್ರಮದ ಟೈಟಲ್ ನೋಡಿದೆ. ನಾ ನಾಯಕಿ ಅಂದ್ರೇನು? ಅವರ ಫೋಟೋ ನೋಡಿ ಅವರೇ ನಾ ನಾಯಕಿ ಅಂತಿದ್ದಾರೆ ಎಂದು ವ್ಯಂಗ್ಯವಾಡಿದರು.

Home add -Advt

ಮಹಿಳೆಯರು ಪ್ರಿಯಾಂಕಾ ಗಾಂಧಿ ಅವರನ್ನು ನಾಯಕಿ ಮಾಡಲು ತಯಾರಿಲ್ಲ, ಇದು ಕಾಂಗ್ರೆಸ್ ನವರಿಗೂ ಗೊತ್ತಿದೆ ಎಂದು ಹೇಳಿದರು.

ಪ್ರಿಯಾಂಕಾ ಗಾಂಧಿಗೆ ನಾನು ನಾಯಕಿ ಎಂದು ಸ್ವಯಂ ಹೇಳಿಕೊಳ್ಳುವ ಪರಿಸ್ಥಿತಿ ಅವರಿಗೆ ಬಂದಿದೆ. ರಾಜ್ಯಕ್ಕೆ ಅವರು ಬರುವ ಬಗ್ಗೆ ನಮ್ಮ ತಕರಾರಿಲ್ಲ. ಆದರೆ ಅವರ ಜಾಹೀರಾತಿನಲ್ಲಿ ನಾ ನಾಯಕಿ ಎಂದು ಹೇಳಿಕೊಂಡಿದ್ದಾರೆ. ಅವರನ್ನು ನಾಯಕಿ ಮಾಡಲು ಕರ್ನಾಟಕದ ಮಹಿಳೆಯರು ತಯಾರಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಹೀಗಾಗಿ ಅವರೇ ತಾವೇ ನಾ ನಾಯಕಿ ಎಂದು ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆ.

ಮಹಿಳೆಯರಿಗಾಗಿ ಕಾಂಗ್ರೆಸ್ ಪ್ರತ್ಯೇಕ ಬಜೆಟ್ ಮಾಡುವ ಬಗ್ಗೆ ಪ್ರತಿಕ್ರಿಯೆ ನೀಡಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಅವರಿಗೆ ಗೊತ್ತಿದೆ. ಅದಕ್ಕೆ ಏನು ಬೇಕಾದರೂ ಆಶ್ವಾಸನೆ ನೀಡುತ್ತಾರೆ ಎಂದರು.

ಕಾಂಗ್ರೆಸ್ ವಿನಾಶದ ಕನಸು ಕಾಣುತ್ತಿದೆ
ಕಾಂಗ್ರೆಸ್ ಯುವಜನೋತ್ಸವವನ್ನು ವಿನಾಶೋತ್ಸವ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಯಥಾ ಬುದ್ದಿ ತಥಾ ಮಾತುಗಳು. ಕಾಂಗ್ರೆಸ್ ವಿನಾಶದ ಕನಸು ಕಾಣುತ್ತಿದೆ. ಎಲ್ಲದರಲ್ಲಿಯೂ ವಿನಾಶವನ್ನೇ ಕಾಣುತ್ತಿದೆ. ಒಳ್ಳೆಯ ಕೆಲಸಗಳನ್ನು ಮೆಚ್ಚುವುದು ಅವರಿಗೆ ತಿಳಿದಿಲ್ಲ. ಇತ್ತೀಚೆಗೆ ಅವರ ಭಾಷೆ, ಚಿಂತನೆ, ನಡವಳಿಕೆ ದೇಶದ ವಿಚಾರ, ರಾಜ್ಯದ ಪ್ರಗತಿ ಬಗ್ಗೆ ಕೀಳು ಮಟ್ಟದ ಮಾತುಗಳು ಹತಾಶ ಪರಿಸ್ಥಿತಿಯನ್ನು ವ್ಯಕ್ತಪಡಿಸುತ್ತದೆ .ಇದಕ್ಕೆ ಬಹಳ ಮಹತ್ವಕೊಡುವ ಅಗತ್ಯವಿಲ್ಲ ಎಂದರು.

*BREAKING NEWS: ಸ್ಯಾಂಟ್ರೋ ರವಿ ಪ್ರಕರಣ; CIDಗೆ ವರ್ಗಾವಣೆ*

https://pragati.taskdun.com/santro-ravi-casecidhome-miniser-araga-jnanendra/

Related Articles

Back to top button