ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರಿಗೆ ಹೃದಯಾಘಾತ ಸಂಭವಿಸಿದೆ.
ಹೈದ್ರಾಬಾದ್ ನಲ್ಲಿ ಅವರಿಗೆ ಹೃದಯಾಘಾತವಾಗಿದ್ದು, ಸ್ಥಳೀಯ ಓಜೋನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹೆಚ್ಚಿನ ಚಿಕಿತ್ಸೆಗಾಗಿ ಏರ್ ಆ್ಯಂಬುಲೆನ್ಸ್ ಮೂಲಕ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ವಿಶ್ವನಾಥ್ ರನ್ನು ಕರೆತರಲು ಸಿದ್ಧತೆಯನ್ನೂ ನಡೆಸಲಾಗಿದೆ.
ನಿನ್ನೆ ಹೈದ್ರಾಬಾದ್ ನಲ್ಲಿ ಕುರುಬ ಸಮಾವೇಶ ಆಯೋಜಿಸಲಾಗಿತ್ತು. ಈ ಸಮಾವೆಶದಲ್ಲಿ ಪಾಲ್ಗೊಳ್ಳಲು ತೆರಳಿದ್ದಾಗ ಲಘು ಹೃದಯಾಘಾತ ಸಂಭವಿಸಿದೆ.