Kannada NewsKarnataka News

ಬನವಾಸಿ ದೇವಸ್ಥಾನ ವೀಕ್ಷಿಸಿದ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ, ಬನವಾಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವಾಸಿಗೆ ಆಗಮಿಸಿ ಕದಂಬೋತ್ಸವ ಉದ್ಘಾಟಿಸುವ ಮೊದಲು ಮಧುಕೇಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ದೇವಸ್ಥಾನದ ಹಿರಿಮೆಯನ್ನು ಕೇಳುತ್ತಾ ಇಡೀ ದೇವಸ್ಥಾನವನ್ನು ವೀಕ್ಷಿಸಿದರು. 

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ, ಶಿವರಾಂ ಹೆಬ್ಬಾರ, ಶಾಸಕರಾದ ಭೀಮಣ್ಣ ನಾಯಕ್, ಸತೀಶ್ ಸೈಲ್, ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

Home add -Advt

Related Articles

Back to top button