Latest
ತೋಟದ ಮನೆಯಲ್ಲಿ ಅಂಗನವಾಡಿ ಸಹಾಯಕಿ ಕೊಲೆ
ಪ್ರಗತಿವಾಹಿನಿ ಸುದ್ದಿ, ಖಾನಾಪುರ
ಗುಂಡೇನಟ್ಟಿ ಗ್ರಾಮದ ಹೊರವಲಯದ ತೋಟದ ಮನೆಯಲ್ಲಿ ಮಧ್ಯವಯಸ್ಕ ಮಹಿಳೆಯೊಬ್ಬಳನ್ನು ಕೊಲೆ ಮಾಡಲಾಗಿದೆ.
ಗ್ರಾಮದ ಅಂಗನವಾಡಿ ಸಹಾಯಕಿ ಜಯಶ್ರೀ ಬೆಳಗಾಂವಕರ (40) ಕೊಲೆಯಾದ ದುರ್ದೈವಿ. ಭಾನುವಾರ ರಾತ್ರಿ ನಡೆದ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಆಕೆಯ 6 ವರ್ಷದ ಮಗನ ಮೇಲೂ ಮಾರಣಾಂತಿಕ ಹಲ್ಲೆನಡೆದಿದ್ದು, ಘಟನಾ ಸ್ಥಳಕ್ಕೆ ನಂದಗಡ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.




