ಪ್ರಗತಿವಾಹಿನಿ ಸುದ್ದಿ, ಧಾರವಾಡ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಂಗಣ್ಣವರ್ ಅವರನ್ನು ಅಮಾನತುಗೊಳಿಸಲಾಗಿದೆ.
ಕಚೇರಿಗೆ ಅನಧಿಕೃತ ಗೈರಾದ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಲಾಗಿದೆ.
ರಂಗಣ್ಣವರ್ ಕಳೆದ 15 ದಿನದಿಂದ ಕಚೇರಿಗೆ ಬಂದಿಲ್ಲ. ಮೇಲಧಿಕಾರಿಗಳಿಗೆ ಯಾವುದೇ ಮಾಹಿತಿ ನೀಡಿಲ್ಲ. ಮೇಲಧಿಕಾರಿಗಳ ಪೊನ್ ಕರೆಯನ್ನೂ ಸ್ವೀಕರಿಸುತ್ತಿಲ್ಲ. ಹಾಗಾಗಿ ಅವರನ್ನು ಅಮಾನತುಗೊಳಿಸಲಾಗಿದೆ.
ಕನ್ನಡ ಸಂಸ್ಕೃತಿ ಇಲಾಖೆಯ ಬೆಳಗಾವಿಯ ಸಹಾಯಕ ನಿರ್ದೇಶಕ ಕರಿಶಂಕರ ಅವರಿಗೆ ಧಾರವಾಡದ ಉಸ್ತುವಾರಿಯನ್ನೂ ವಹಿಸಲಾಗಿದೆ.