Belagavi NewsBelgaum NewsKannada NewsKarnataka News

ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ: ಕುಮಾರಸ್ವಾಮಿ

ಪ್ರಗತಿವಾಹಿನಿ ಸುದ್ದಿ: ಈ ಬಗ್ಗೆ ರಾತ್ರಿಯೇ ದೇವೇಗೌಡರ ಬಳಿ ಚರ್ಚೆ ಮಾಡಿದ್ದೇನೆ. ನಾಳೆ ಕೋರ್ ಕಮಿಟಿ ಸಭೆಯಲ್ಲಿ ಉಚ್ಚಾಟನೆ ಬಗ್ಗೆ ತೀರ್ಮಾನ ಆಗಬೇಕಿತ್ತು. ಆದರೆ ಇಂದೆ ಉಚ್ಚಾಟನೆ ಆಗಿದೆ. ಈ ನೆಲದ ಕಾನೂನಿನಲ್ಲಿ ತಪ್ಪು ಆಗಿದ್ದರೆ ಶಿಕ್ಷೆ ಆಗಬೇಕು ಎಂದು ಪ್ರಜ್ವಲ್ ರೇವಣ್ಣ ಉಚ್ಚಾಟನೆ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.‌

ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ದೇವೇಗೌಡರನ್ನು ನನ್ನನ್ನು ಯಾಕೆ ತರ್ತೀರಾ. ಈಗಾಗಲೇ ನಾವು ಬೇರೆ ಆಗಿದ್ದೇವೆ. ನಮ್ಮ ವ್ಯವಹಾರ ಅವರ ವ್ಯವಹಾರ ಬೇರೆ ಬೇರೆ ನಡೆಯುತ್ತೆ. ಬಿಜೆಪಿಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ. ರಾಜ್ಯದ ಹೆಣ್ಣು ಮಕ್ಕಳ ಧ್ವನಿಯಾಗಿ ನಾನು ಧ್ವನಿ ಎತ್ತುತ್ತೇನೆ. ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ತಪ್ಪು ಆಗಿದ್ರೆ ಈ ನೆಲದ ಕಾನೂನು ಪ್ರಕಾರ ಶಿಕ್ಷೆ ಆಗಬೇಕು.‌ ಈ ನಿಟ್ಟಿನಲ್ಲಿ ನನ್ನ ಸ್ಟಾಂಡ್ ಮುಂದುವರೆದಿದೆ.‌ ಕಾನೂನು ಉಲ್ಲಂಘನೆ ಆಗಿದ್ರೆ, ಬಲವಂತ ಆಗಿದ್ರೆ ಕಾನೂನು ರೀತಿಯ ಕ್ರಮ ಆಗಲಿ ಎಂದು ತಿಳಿಸಿದರು.‌

ಪ್ರಿಯಾಂಕ್ ಖರ್ಗೆ ಟ್ವಿಟ್ ವಿಚಾರವಾಗಿ ಮತನಾಡಿದ ಅವರು, ಪ್ರಧಾನಿಗಳಿಗೂ ಈ ವಿಚಾರಕ್ಕೂ ಸಂಬಂಧ ಇಲ್ಲ. ಮೋದಿ, ಬಿಜೆಪಿ, ದೇವೇಗೌಡರಿಗೂ ಈ ಪ್ರಕರಣಕ್ಕೂ ಸಂಬಂಧ ಇಲ್ಲ. 2012 ರ ಪ್ರಕರಣ ಅಂದ ಮೇಲೆ ಇಷ್ಟು ವರ್ಷ ಏನ್ ಮಾಡುತ್ತಿದ್ದರು. ನನ್ನ ಹಾಗೂ ನನ್ನ ತಂದೆಯರ ವಿರುದ್ಧ ಯಾರು ಸಂಶಯ ಪಡಬೇಡಿ ಎಂದು ಕುಮಾರಸ್ವಾಮಿ ಅವರು ಹೇಳಿಕೆ ನೀಡಿದ್ದಾರೆ.‌

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button