Latest

*ಡೆಂಗ್ಯೂ ಜ್ವರಕ್ಕೆ ಆರೋಗ್ಯಾಧಿಕಾರಿಯೇ ಬಲಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಆರೋಗ್ಯಾಧಿಕಾರಿಯೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ.

Home add -Advt

ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಈ ಘಟನೆ ನಡೆದಿದೆ. 32 ವರ್ಷದ ನಾಗೇಂದ್ರ ಡೆಂಗ್ಯೂ ಜ್ವರದಿಂದ ಸಾವನ್ನಪ್ಪಿರುವ ಸಮುದಾಯ ಆರೋಗ್ಯಾಧಿಕಾರಿ. ಮೈಸೂರಿನಲ್ಲಿ ಡೆಂಗ್ಯು ಪ್ರಕರಣ ವ್ಯಾಪಕವಾಗಿ ಹರಡುತ್ತಿದೆ.

ಜಿಲ್ಲೆಯಲ್ಲಿ ಈವರೆಗೆ 162 ಡೆಂಗ್ಯೂ ಆಕ್ಟೀವ್ ಕೇಸ್ ಗಳು ದಾಖಲಾಗಿವೆ. ಇದೀಗ, ಸಮುದಾಯ ಆರೋಗ್ಯಾಧಿಕಾರಿಯಾಗಿದ್ದ ನಾಗೇಂದ್ರ ಡೆಂಗ್ಯೂ ದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.


Related Articles

Back to top button