Kannada NewsKarnataka NewsLatest

*ಬೆತ್ತಲೆ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ: ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಬೆತ್ತಲೆ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆಯೊಡ್ದಿ ಬ್ಲ್ಯಾಕ್ ಮೇಲ್ ಮಾಡಿದ್ದಕ್ಕೆ ಎಂಬಿಎ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಇಲ್ಲಿನಹೆಸರುಘಟ್ಟ ರಸ್ತೆಯ ಶಾಂತಿನಗರದಲ್ಲಿ ಈ ಘಟನೆ ನಡೆದಿದೆ. ಕೇರಳ ಮೂಲದ ಜಗನ್ (25) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಖಾಸಗಿ ಕಾಲೇಜಿನಲ್ಲಿ ಎಂಬಿಎ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಶಾಂತಿನಗರದಲ್ಲಿ ಬಾಡಿಗೆ ರೂಂ ನಲ್ಲಿ ವಾಸವಾಗಿದ್ದ.

Home add -Advt

ಇದೀಗ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತದೇಹದ ಬಳಿ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ಮೂರು ನಂಬರ್ ಗಳನ್ನು ಯುವಕ ಬರೆದಿಟ್ಟಿದ್ದಾನೆ. ಪೊಲೀಸರು ಪರಿಶೀಲನೆ ನಡೆಸಿದಾಗ ಫೇಕ್ ವಿಡಿಯೋ ಕಾಲ್ ನಲ್ಲಿ ಹಣ ಕಳೆದುಕೊಂಡಿರುವುದು, 25 ಸಾವಿರ ಹಣ ವರ್ಗಾವಣೆ ಮಾಡಿರುವುದು ಹಾಗೂ ಬೆತ್ತಲೆ ಫೋಟೋ ಹಾಗೂ ವಿಡಿಯೋ ವೈರಲ್ ಮಾಡುವ ಬೆದರಿಕೆ ಹಾಕಿರುವುದು ಪತ್ತೆಯಾಗಿದೆ.


Related Articles

Back to top button