Latest

ಬಿಗ್ ಶಾಕ್: ಕಾಂಗ್ರೆಸ್ ತೊರೆದ ಪ್ರಿಯಾಂಕಾ

ಪ್ರಗತಿವಾಹಿನಿ ಸುದ್ದಿ, ನವದೆಹಲಿ: 
ಮಾಜಿ ಎಐಸಿಸಿ ವಕ್ತಾರೆ ಪ್ರಿಯಾಂಕಾ ಚತುರ್ವೇದಿ ಕಾಂಗ್ರೆಸ್ ಪಕ್ಷ ತೊರೆದ ಕೆಲವೇ ಗಂಟೆಗಳಲ್ಲಿ ಅಧಿಕೃತವಾಗಿ ಶಿವಸೇನೆ ಸೇರಿದ್ದಾರೆ.
ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿಗೆ ಟ್ವೀಟ್‌ ಮೂಲಕ ರಾಜೀನಾಮೆ ಪತ್ರ ರವಾನಿಸಿದ ಕೆಲ ಹೊತ್ತಿನಲ್ಲೇ ಪ್ರಿಯಾಂಕ ಚತುರ್ವೇದಿ ಅವರು ಶಿವಸೇನೆ ಪಕ್ಷದ ಮುಖ್ಯಸ್ಥ ಉದ್ಧವ್​​ ಠಾಕ್ರೆ ಮತ್ತು ಅವರ ಪುತ್ರ ಆದಿತ್ಯ ಠಾಕ್ರೆ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್‌ನಲ್ಲಿ ಗೂಂಡಾಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಪ್ರಿಯಾಂಕ ಚತುರ್ವೇದಿ ಪಕ್ಷ ಬಿಡುವ ಮುನ್ನ ಅಸಮಾಧಾನ ವ್ಯಕ್ತಪಡಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button