Latest

ಬೆಳಗಾವಿ: ಪಿಯುಸಿ ಪರೀಕ್ಷಾರ್ಥಿಗಳೇ ನಾಳೆ ಪರೀಕ್ಷಾಕೇಂದ್ರಕ್ಕೆ ಬೇಗ ತಲುಪಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಪಿಯುಸಿ ಪರೀಕ್ಷೆ ಬರೆಯುತ್ತಿರುವ ಬೆಳಗಾವಿ ನಗರದ ವಿದ್ಯಾರ್ಥಿಗಳೇ ಸೋಮವಾರ ನೀವು ನಿಮ್ಮ ಪರೀಕ್ಷೆ ಕೇಂದ್ರಕ್ಕೆ ಬೇಗ ತಲುಪಬೇಕು. ಇಲ್ಲವಾದಲ್ಲಿ ಪರೀಕ್ಷೆಯೇ ಮಿಸ್ ಆಗಬಹುದು.

Home add -Advt

ಸೋಮವಾರ ಬೆಳಗಾವಿ ನಗರಕ್ಕೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಬರುತ್ತಿರುವ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಯಲ್ಲಿ ಬೆಳಗ್ಗೆ 8ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಂಚಾರ ನಿಷೇಧಿಸಲಾಗುತ್ತಿದೆ.

ಸೋಮವಾರ ಬೆಳಗಾವಿ ನಗರ ಸಂಚಾರದಲ್ಲಿ ಭಾರೀ ಬದಲಾವಣೆ

ಹಾಗಾಗಿ ಬೆಳಗ್ಗೆ 8.30ರೊಳಗೆ ಪರೀಕ್ಷಾ ಕೇಂದ್ರ ತಲುಪುವಂತೆ ವಿದ್ಯಾರ್ಥಿಗಳು ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಪೊಲೀಸರು ಕೋರಿದ್ದಾರೆ. ಪರೀಕ್ಷೆ 10.30ಕ್ಕೆ ಆರಂಭವಾಗಲಿದೆಯಾದರೂ ವಿದ್ಯಾರ್ಥಿಗಳು ಮಾತ್ರ 2 ಗಂಟೆ ಮುಂಚಿತವಾಗಿ ಹೋಗಬೇಕಾಗಿದೆ.

(ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಪರಿಚಿತರಿಗೆ ಹಾಗೂ ಎಲ್ಲಾ ಗ್ರುಪ್ ಗಳಿಗೆ ಶೇರ್ ಮಾಡಿ)

 

Related Articles

Back to top button