Latest

ಮಾಲೆಗಾಂವ್ ಸ್ಫೋಟ: ಪ್ರಜ್ಞಾಸಿಂಗ್ ವಿರುದ್ಧ ಸಾಕ್ಷ್ಯಾಧಾರ ಕೊರತೆ

ಪ್ರಗತಿವಾಹಿನಿ ಸುದ್ದಿ,  ಮುಂಬೈ:
ಮಾಲೇಗಾಂವ್​ ಸ್ಫೋಟ ಪ್ರಕರಣದಲ್ಲಿ ಪ್ರಜ್ಞಾ ಸಿಂಗ್​ ಠಾಕೂರ್​ ವಿರುದ್ಧ  ಸಾಕ್ಷ್ಯಾಧಾರದ ಕೊರತೆಗಳ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ರಾಷ್ಟ್ರೀಯ ತನಿಖಾ ದಳ ಅಸಹಾಯಕತೆ ವ್ಯಕ್ತಪಡಿಸಿದೆ.
ಮಾಲೇಗಾಂವ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾಗಿರುವ ಪ್ರಜ್ಞಾ ಸಿಂಗ್​ ಠಾಕೂರ್​ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಘಟನೆಯಲ್ಲಿ ಮೃತಪಟ್ಟಿದ್ದ ಸೈಯದ್​ ಅಹ್ಮದ್​ ಅವರ ಪುತ್ರ ನಿಸಾರ್​ ಬಿಲಾಲ್​ ಎನ್​ಐಎಗೆ ಮನವಿ ಸಲ್ಲಿಸಿದ್ದರು.
ಮಾಲೇಗಾಂವ್​ ಸ್ಫೋಟ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ಸಾಕ್ಷ್ಯಾಧಾರದ ಕೊರತೆ ಇದೆ. ಆದರೆ, ಚುನಾವಣೆಗೆ ಸ್ಪರ್ಧಿಸಲು ಅವರಿಗೆ ಅವಕಾಶ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳುವುದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಅದು ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ ಎಂದು  ಎನ್​ಐಎ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button