ಪ್ರಗತಿವಾಹಿನಿ ಸುದ್ದಿ, ಗೋಕಾಕ:
ಸಿದ್ಧರಾಮಯ್ಯ ನಮ್ಮ ನಾಯಕರು, ಕಾಂಗ್ರೇಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾದ ನಾನು ಯಾವುದೇ ಕಾರಣಕ್ಕೂ ಬಿಜೆಪಿ ಸೇರುವದಿಲ್ಲ ಎಂದು ಯುವಧುರೀಣ ಲಖನ್ ಜಾರಕಿಹೊಳಿ ಹೇಳಿದ್ದಾರೆ.
ಅವರು, ಬುಧವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಕಳೆದ ಹಲವು ದಿನಗಳಿಂದ ಮಾಧ್ಯಮಗಳಲ್ಲಿ ನಾನು ಬಿಜೆಪಿ ಸೇರುವದಾಗಿ ಸುದ್ದಿಯಾಗುತ್ತಿದೆ. ನಾನು ಹಲವು ದಶಕಗಳಿಂದ ಕಾಂಗ್ರೇಸ್ ಪಕ್ಷಕ್ಕೆ ನಿಷ್ಠೆಯಿಂದ ದುಡಿಯುತ್ತಿದ್ದೆನೆ. ಈ ಹಿಂದೆ ಬಿಜೆಪಿ ಸೇರುವುದೆ ಆಗಿದ್ದರೆ ಎರಡು ಬಾರಿ ಯಮಕನಮರಡಿ ಕ್ಷೇತ್ರದಿಂದ ಶಾಸಕನಾಗಿ ಆಯ್ಕೆಯಾಗುತ್ತಿದ್ದೆ. ಸಿದ್ಧರಾಮಯ್ಯ ನಮ್ಮ ನಾಯಕರು ಹೀಗಾಗಿ ಕಾಂಗ್ರೇಸ್ ಪಕ್ಷ ತೊರೆಯುವ ಮಾತಿಲ್ಲ ಎಂದರು.