ಚೆನ್ನೈ:
ನಿನ್ನೆ ನಡೆದ ಲೋಕಸಭಾ ಚುನಾವಣೆಯ ಮತದಾನ ವೇಳೆ ಸೂಪರ್ಸ್ಟಾರ್ ರಜನಿಕಾಂತ್ ಅವರ ಬಲಗೈ ಬೆರಳಿಗೆ ಶಾಯಿ ಹಾಕಿದ ಚುನಾವಣಾ ಸಿಬ್ಬಂದಿ ಈಗ ಶಿಸ್ತುಕ್ರಮ ಎದುರಿಸಬೇಕಾಗಿದೆ.
ಚುನಾವಣಾ ಆಯೋಗದ ನಿರ್ದೇಶನದಂತೆ ಈ ಚುನಾವಣೆಯಲ್ಲಿ ಎಡಗೈ ತೋರು ಬೆರಳಿಗೆ ಶಾಯಿ ಹಾಕಬೇಕಿತ್ತು. ಆದರೆ, ಗುರುವಾರ ಬೆಳಗ್ಗೆ ಚೆನ್ನೈನ ಸ್ಟೆಲ್ಲಾ ಮೇರಿಸ್ ಕಾಲೇಜಿನಲ್ಲಿ ಮತ ಚಲಾಯಿಸಿದ ರಜನಿಕಾಂತ್ ಅವರ ಬಲಗೈ ತೋರು ಬೆರಳಿಗೆ ಶಾಯಿ ಹಾಕಲಾಗಿದೆ.
ಈ ಕುರಿತು ಜಿಲ್ಲಾ ಚುನಾವಣಾಧಿಕಾರಿಗೆ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ತಮಿಳುನಾಡು ರಾಜ್ಯ ಚುನಾವಣಾ ಆಯುಕ್ತ ಸತ್ಯಬಾತ್ರ ಸಾಹೋ ತಿಳಿಸಿದ್ದಾರೆ.