ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ರಾಜ್ಯದಲ್ಲಿ ಮತ್ತೆ 4 ಹೊಸ ತಾಲೂಕುಗಳನ್ನು ರಚಿಸಲು ಸರಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಮಂಡಿಸಿದ 2019-20ನೇ ಸಾಲಿನ ಆಯವ್ಯಯದಲ್ಲಿ ಹೊಸ ತಾಲೂಕು ರಚನೆ ಘೋಷಿಸಿದರು.
ಇದರಿಂದಾಗಿ ರಾಜ್ಯದ ಒಟ್ಟೂ ತಾಲೂಕುಗಳ ಸಂಖ್ಯೆ 231ಕ್ಕೆ ಏರಿಗದಂತಾಗಿದೆ.
ರಾಮನಗರದ ಹಾರೋಹಳ್ಳಿ, ಚಿಕ್ಕಬಳ್ಳಾಪುರ ಜಿಲ್ಲೆಯ ಜೇಳೂರು, ಬಾಗಲಕೋಟೆಯ ತೇರದಾಳ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕಳಸವನ್ನು ಹೊಸ ತಾಲೂಕುಗಳನ್ನಾಗಿ ಘೋಷಿಸಲಾಗಿದೆ.