Karnataka NewsLatest

13 ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಣೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2022-23 ನೇ ಸಾಲಿನ ಇಲಾಖೆಯ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆಯಡಿ ಆಯ್ಕೆಯಾದ ವಿಕಲಚೇತನ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಬೆಳಗಾವಿಯ ತಮ್ಮ ಗೃಹ ಕಚೇರಿಯಲ್ಲಿ ಭಾನುವಾರ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿದರು.

ಸರಕಾರದಿಂದ ಪೂರೈಸಲಾದ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಫಲಾನುಭವಿಗಳು ಸ್ವಾಭಿಮಾನಿಗಳಾಗಿ ಜೀವನ ನಡೆಸುವಂತೆ ಲಕ್ಷ್ಮೀ ಹೆಬ್ಬಾಳಕರ ಈ ಸಂದರ್ಭದಲ್ಲಿ ಹೇಳಿದರು.

Home add -Advt

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾಗರಾಜು ಆರ್. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ನಾಮದೇವ ಬಿಲ್ಕರ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related Articles

Back to top button