Latest

*ಚಾಮರಾಜನಗರ ಆಸ್ಪತ್ರೆ ಆಕ್ಸಿಜನ್ ದುರಂತ; ಮುರುತನಿಖೆಗೆ ರಾಜ್ಯ ಸರ್ಕಾರ ನಿರ್ಧಾರ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣದ ಮರುತನಿಖೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್, ಈ ಹಿಂದಿನ ಬಿಜೆಪಿ ಸರ್ಕಾರ ತನಿಖೆಗೆ ಕೆಲವರನ್ನು ನೇಮಕ ಮಾಡಿತ್ತು. ಆದರೆ ಆ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ತನಿಖೆ ಎಲ್ಲಿಯವರೆಗೆ ಬಂದಿದೆ ಎಂಬ ಮಾಹಿತಿಯೂ ಇಲ್ಲ. ಹಾಗಾಗಿ ನಮ್ಮ ಸರ್ಕಾರ ಪ್ರಕರಣದ ಮರು ತನಿಖೆಗೆ ಆದೇಶ ನೀಡುತ್ತಿದೆ ಎಂದರು.

Home add -Advt

ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಮನ್ವಯ ಇರುವುದರಿಂದ ಮರು ತನಿಖೆ ನಡೆಸಬೇಕಾಗುತ್ತದೆ ಎಂದು ಹೇಳಿದರು.

2021 ಮೇ 2ರಂದು ಕೋವಿಡ್ ಸಂದರ್ಭದಲ್ಲಿ ಚಾಮರಾಜನಗರದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ 36 ಜನರು ಆಕ್ಸಿಜನ್ ಕೊರತೆಯಿಂದ ದಾರುಣವಾಗಿ ಸಾವನ್ನಪ್ಪಿದ್ದರು.

https://pragati.taskdun.com/lokayuktaraidkushalanagara-aeearrest/

Related Articles

Back to top button