Latest
ಸೇವ್ ವಿಟಿಯು: ಚಿಕ್ಕೋಡಿಯಲ್ಲಿ ಕನಪ ಪ್ರತಿಭಟನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ವಿಭಜನೆ ಖಂಡಿಸಿ ಕರ್ನಾಟಕ ನವ ನಿರ್ಮಾಣ ಪಡೆ ಚಿಕ್ಕೋಡಿಯಲ್ಲಿ ಪ್ರತಿಭಟನೆ ನಡೆಸಿತು.
ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಮುಖ್ಯಮಂತ್ರಿಗಳು ಉತ್ತರ ಕರ್ನಾಟಕ ಕುರಿತು ಮಲತಾಯಿ ಧೋರಣೆ ತೋರುತ್ತಿದ್ದಾರೆ ಎಂದು ಆರೋಪಿಸಿದರು.
ಕರ್ನಾಟಕ ನವನಿರ್ಮಾಣ ಪಡೆಯ ಅಧ್ಯಕ್ಷ ಅರುಣ ಠಕ್ಕಣ್ಣ ಮನವಿ ಸಲ್ಲಿಸಿದರು.



