Latest

*40% ಕಮಿಷನ್ ಗೆ ಈ ದುಡ್ಡೇ ದಾಖಲೆಯಲ್ಲವೇ?; ಡಿ.ಕೆ.ಶಿವಕುಮಾರ್ ಪ್ರಶ್ನೆ*

 

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸೌಧದ ಪ್ರತಿ ಗೋಡೆಯಲ್ಲೂ ಕಾಸಿಲ್ಲದೇ ಏನೂ ನಡೆಯಲ್ಲ, ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂಬುದಕ್ಕೆ ಇಂದು ವಿಧನಸೌಧದಲ್ಲಿ ಪತ್ತೆಯಾದ ಹಣವೇ ದಾಖಲೆಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ವಿಧಾನಸೌಧದಲ್ಲಿ 10.5 ಲಕ್ಷ ರೂಪಾಯಿ ಹಣ ಪತ್ತೆ ವಿಚಾರವಾಗಿ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ವಿಧಾನಸೌಧದ ಪ್ರತಿ ಗೋಡೆಗೂ ಹಣವಿಲ್ಲದೇ ಇಂದು ಏನೂ ನಡೆಯುತ್ತಿಲ್ಲ. ಇದು ಬಿಜೆಪಿ ಭ್ರಷ್ಟ ಸರ್ಕಾರಕ್ಕೆ ಸಾಕ್ಷಿ. ವಿಧಾನಸೌಧದಲ್ಲಿ ಶೇ.40-50ರಷ್ಟು ಕಮಿಷನ್ ನಡೆಯುತ್ತಿದೆ ಎಂದು ಅನೇಕ ಮಾಹಿತಿಗಳು ನಮಗೆ ಬರುತ್ತಿವೆ. ಸರ್ಕಾರದ ಭ್ರಷ್ಟಾಚಾರಕ್ಕೆ ಬೇಸತ್ತು ಹಲವು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಕೆಲವರು ದಯಾಮರಣಕ್ಕಾಗಿ ಅರ್ಜಿ ಹಾಕಿದ್ದಾರೆ. ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಹೊರಬಂದು ಮಾತನಾಡುವ ಧೈರ್ಯ ಅಧಿಕಾರಿಗಳಿಗೆ ಇಲ್ಲದಾಗಿದೆ ಎಂದು ವಾಗ್ದಾಳಿ ನಡೆಸಿದರು.

Home add -Advt

ಈಗ ವಿಧಾನಸೌಧಕ್ಕೆ ಬರುತ್ತಿದ್ದ ಸಹಾಯಕ ಇಂಜಿನಿಯರ್ ಬಳಿ 10.5 ಲಕ್ಷ ಹಣ ಪತ್ತೆಯಾಗಿದೆ. ಆತನನ್ನು ವಶಕ್ಕೆ ಪಡೆದ ಪೊಲೀಸರು, ಮಂತ್ರಿ ಮನೆಯಿಂದ ಕರೆ ಬಂತೆಂದು ಆತನನ್ನು ಬಿಟ್ಟು ಕಳುಹಿಸಿದ್ದಾರೆ. ಅಲ್ಲಿನ ಪೊಲೀಸ್ ಸಿಬ್ಬಂದಿ ಹೇಳುತ್ತಿದ್ದಾರೆ. 40% ಕಮಿಷನ್ ಗೆ ಈ ದುಡ್ಡೇ ದಾಖಲೆ ಅಲ್ಲವೇ? ಎಂದು ಪ್ರಶ್ನಿಸಿದರು. ಇನ್ನು 60 ದಿನ ಮಾತ್ರ ಈ ಸರ್ಕಾರವಿರುವುದು ಏನೇನು ಮಾಡುತ್ತದೆ ನೋಡೋಣ ಕಿಡಿಕಾರಿದ್ದಾರೆ.

*ವಿಧಾನಸೌಧದಲ್ಲಿ 10.5 ಲಕ್ಷ ರೂಪಾಯಿ ಅನಧಿಕೃತ ಹಣ ಪತ್ತೆ; PWD ಸಹಾಯಕ ಇಂಜಿನಿಯರ್ ವಶಕ್ಕೆ*

https://pragati.taskdun.com/vidhanasoudha10-5-lakh-foundpwd-assistant-engineer-arrest/

Related Articles

Back to top button