Belagavi NewsBelgaum NewsKannada NewsKarnataka NewsNational

*ನಗೆ ಬೇಕರಿ-ನಗಬೇಕ್ರಿ ಹಾಸ್ಯ ಕಾರ್ಯಕ್ರಮ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ಹಾಸ್ಯಕೂಟ ಮತ್ತು ಕನ್ನಡ ಸಾಹಿತ್ಯ ಭವನ ವಿಶ್ವಸ್ತ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಹಾಸ್ಯಕೂಟದ 11 ನೇ ವಾರ್ಷೀಕೋತ್ಸವದ ನಿಮಿತ್ತವಾಗಿ ಇದೆ ದಿ. 17 ಗುರುವಾರ  ಸಾಯಂಕಾಲ 4:30 ಕ್ಕೆ ಚೆನ್ನಮ್ಮ ವೃತ್ತದ ಬಳಿಯಿರುವ ಕನ್ನಡ ಸಾಹಿತ್ಯ ಭವನದಲ್ಲಿ “ನಗೆ ಬೇಕರಿ – ನಗಬೇಕ್ರಿ” ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ಪ್ರಮುಖ ಭಾಷಣಕಾರರಾಗಿ ಖ್ಯಾತ ಹನಿಗವಿ ಎಚ್ ಡುಂಡಿರಾಜ್ ಆಗಮಿಸಲಿದ್ದಾರೆ.ಮ, ಅಧ್ಯಕ್ಷತೆಯನ್ನು ಖ್ಯಾತ ನ್ಯಾಯವಾದಿಗಳಾದ ಎಸ್. ಎಂ. ಕುಲಕರ್ಣಿಯವರು ವಹಿಸಿಕೊಳ್ಳಲಿದ್ದು ಅತಿಥಿಗಳಾಗಿ ರಂಗಸಂಪದದ ಅಧ್ಯಕ್ಷರಾದ ಅರವಿಂದ ಕುಲಕರ್ಣಿಯವರು ಆಗಮಿಸಲಿದ್ದಾರೆ. 

Home add -Advt

ಪ್ರಾಯೋಜಕತ್ವವನ್ನು ನಿವೃತ್ತ ಬ್ಯಾಂಕ್ ಅಧಿಕಾರಿಗಳಾದ ಅರವಿಂದ ಹುನಗುಂದ ವಹಿಸಿಕೊಂಡಿದ್ದಾರೆ. ಪ್ರಾಸ್ತಾವಿಕ ನುಡಿಯನ್ನು ಹಾಸ್ಯಕೂಟ ಸಂಚಾಲಕ ಗುಂಡೇನಟ್ಟಿ ಮಧುಕರ ಆಡಲಿದ್ದಾರೆ.

ಪ್ರವೇಶ ಉಚಿತವಾಗಿದ್ದು  ಹಾಸ್ಯಪ್ರಿಯರು ಈ ಕಾರ್ಯಕ್ರಮದಲ್ಲಿ  ಪಾಲ್ಗೊಂಡು ನಕ್ಕು ಹಗುರಾಗುವಂತೆ  ಕ.ಸಾ.ಭ. ವಿಶ್ವಸ್ತ ಮಂಡಳಿಯ ಗೌರವ ಕಾರ್ಯದರ್ಶಿ  ರಾಮಚಂದ್ರ ಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button