Latest

*ಗುಡುಗು, ಮಿಂಚು ಸಹಿತ ಮತ್ತೆ ಭಾರಿ ಮಳೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಕೊರೊನಾ ರೂಪಾಂತರಿ ವೈರಸ್ ಭೀತಿ ನಡುವೆಯೇ ಮತ್ತೆ ವರುಣಾರ್ಭಟ ಜೋರಾಗಲಿದ್ದು, ಇಂದು ತಮಿಳುನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಮಿಳುನಾಡಿನ ತಿರುವಳ್ಳುರು, ಚೆನ್ನೈ, ಚೆಂಗಲ್ಪಟ್ಟು, ಕಾಂಚೀಪುರಂ, ಮೈಲಾಡುತುರೈ, ನಾಗಪಟ್ಟಣಂ, ತಂಜಾವೂರು, ತಿರುವಾರೂರು, ಕಾರೈಕಲ್ ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ತಮಿಳುನಾಡು ಹಾಗು ಪುದುಚೇರಿಯ ರಾಣಿಪೇಟ್, ವೆಲ್ಲೂರು, ತಿರುವಣ್ಣಾಮಲೈ, ತಿರುಪತ್ತೂರು, ವಿಲ್ಲುಪುರಂ, ಕಲ್ಲುಕುರುಚಿ, ಕಡಲೂರು, ಪೆರಂಬೂರು, ಅರಿಯಲೂರ್, ತಿರುಚಿರಾಪಳ್ಳಿ, ನೀಲಗಿರಿ, ತಿರುನಲ್ವೇಲಿ ಜಿಲ್ಲೆಗಳಲ್ಲಿ ಮುಂದಿನ ಕೆಲಗಂಟೆಗಳಲ್ಲಿ ಶಾದಾರಣ ಮಳೆಯಾಗಲಿದೆ ಎಂದು ಸ್ಥಳೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶವು ಖಿನ್ನತೆಗೆ ತಿರುಗಿದ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ನಿನ್ನೆಯಿಂದ ಮಳೆಯಾಗುತ್ತಿದ್ದು, ಡಿ.26ರವರೆಗೂ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

Home add -Advt

ಬೆಂಕಿ ಅವಘಡ; ನಾಲ್ಕು ಅಂಗಡಿಗಳು ಭಸ್ಮ

https://pragati.taskdun.com/four-shops-burnt-down-in-fire-accident/

Related Articles

Back to top button