Karnataka News

*ಸಿಡಿಲು ಬಡಿದು 14 ವರ್ಷದ ಬಾಲಕ ಸಾವು*

ಪ್ರಗತಿವಾಹಿನಿ ಸುದ್ದಿ: ಸಿಡಿಲು ಬಡಿದು 14 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೆದಿಲ ಗ್ರಾಮ ಗಡಿಯಾರ ಎಂಬಲ್ಲಿ ನಡೆದಿದೆ.

ಸುಭೋದ್ (14) ಮೃತ ಬಾಲಕ. ಮನೆಯಂಗಳದಲ್ಲಿ ನಿಂತಿದ್ದ ವೇಳೆ ಏಕಾಏಕಿ ಸಿಡಿಲು ಅಪ್ಪಳಿಸಿದ್ದು, ಬಾಲಕ ಆಘಾತಗೊಂಡಿದ್ದ. ತಕ್ಷಣ ಆತನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಬಾಲಕ ಸಾವನ್ನಪ್ಪಿದ್ದಾನೆ.

Home add -Advt

Related Articles

Back to top button