Latest

ಬೆಂಗಳೂರಿನಾದ್ಯಂತ ನಿಷೇಧಾಜ್ಞೆ ಜಾರಿ

ಬೆಂಗಳೂರಿನಾದ್ಯಂತ ನಿಷೇಧಾಜ್ಞೆ ಜಾರಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು –

ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಬೆಂಗಳೂರು ನಗರಾದ್ಯಂತ 144ನೇ ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

Home add -Advt

ವಿಧಾನಸಭೆಯಲ್ಲಿ ಸರಕಾರ ವಿಶ್ವಾಸಮತ ಯಾಚನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಇಂದಿನಿಂದ ಜುಲೈ 25ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. 5 ಜನಕ್ಕಿಂತ ಹೆಚ್ಚು ಜನ ಒಂದು ಕಡೆ ಸೆರಲು ಅವಕಾಶವಿರುವುದಿಲ್ಲ.

ಬೆಂಗಳೂರಿನಾದ್ಯಂತ ಮದ್ಯದ ಅಂಗಡಿಗಳನ್ನೂ ಬಂದ್ ಮಾಡಲು ಆದೇಶಿಸಲಾಗಿದೆ.

ಮುಖ್ಯಮಂತ್ರಿ ಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿ ಭಾಷಣ ಮಾಡುತ್ತಿದ್ದು, ಭಾಷಣ ಮುಗಿದ ತಕ್ಷಣ ವಿಶ್ವಾಸ ಮತ ಯಾಚನೆಗೆ ಮತದಾನ ನಡೆಯುವ ಸಾಧ್ಯತೆ ಇದೆ.

ನಾನು ನನ್ನದೇ ಕೆಲವು ಕಾರಣಗಳಿಗಾಗಿ ಸಮಯ ತೆಗೆದುಕೊಂಡಿದ್ದೇನೆ ವಿನಃ ಈ ರಾಜ್ಯವನ್ನು ಲೂಟಿ ಮಾಡಲು ಅಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ತಮ್ಮ ರಾಜಕೀಯ ಜೀವನವನ್ನು ಕುಮಾರಸ್ವಾಮಿ ಮೆಲುಕು ಹಾಕುತ್ತಿದ್ದಾರೆ.

 

 

Related Articles

Back to top button