Kannada NewsKarnataka NewsLatest

ಹಿಡಕಲ್ ಜಲಾಶಯದಿಂದ 15 ದಿನ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ, ಗೋಕಾಕ : ಹಿಡಕಲ್ ಜಲಾಶಯದಿಂದ ನಾಳೆಯಿಂದ ೧೫ ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು ೬.೮೦ ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.
ನಾಳೆ ಮಂಗಳವಾರ ಸಂಜೆ ೬ ಗಂಟೆಗೆ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದಾರೆ.
ಘಟಪ್ರಭಾ ಎಡದಂಡೆ ಕಾಲುವೆಗೆ ೨೪೦೦ ಕ್ಯೂಸೆಕ್ಸ್, ಘಟಪ್ರಭಾ ಬಲದಂಡೆ ಕಾಲುವೆಗೆ ೨೦೦೦ ಕ್ಯೂಸೆಕ್ಸ್ ಮತ್ತು ಸಿಬಿಸಿ ಕಾಲುವೆಗೆ ೫೫೦ ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗಿದೆ. ಮಾ.೯ ರಿಂದ ಮಾ.೨೪ ರವರೆಗೆ ಒಟ್ಟು ೧೫ ದಿನಗಳವರೆಗೆ ಸುಮಾರು ೬.೮೦ ಟಿಎಂಸಿ ನೀರನ್ನು ಹರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಗೋಕಾಕ, ಮೂಡಲಗಿ, ರಾಯಬಾಗ, ಮುಧೋಳ, ಬೀಳಗಿ, ಜಮಖಂಡಿ ತಾಲೂಕುಗಳ ರೈತರು ಇದರ ಸದ್ಬಳಕೆ ಮಾಡಿಕೊಳ್ಳಬೇಕು. ಅನಾವಶ್ಯಕವಾಗಿ ನೀರನ್ನು ಪೋಲು ಮಾಡಬಾರದು. ಕೃಷಿ ಜಮೀನುಗಳಿಗೆ ಅನುಕೂಲವಾಗಲು ಹಿಡಕಲ್ ಜಲಾಶಯದಿಂದ ಎಲ್ಲ ಕಾಲುವೆಗಳಿಗೆ ನೀರು ಹರಿಸಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button