Kannada NewsLatest
ಬಸ್ ಮಗುಚಿ 15 ಜನರಿಗೆ ಗಾಯ
ಪ್ರಗತಿವಾಹಿನಿ ಸುದ್ದಿ, ಹುಕ್ಕೇರಿ:
ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ಬಸ್ ಪಲ್ಟಿಯಾಗಿ ಹದಿನೈದು ಜನ ಗಾಯಗೊಂಡಿದ್ದಾರೆ.
ಸಂಕೇಶ್ವರ ಗೋಕಾಕ ರಾಜ್ಯ ಹೆದ್ದಾರಿ ಮೇಲೆ ಗೋಕಾಕ ದಿಂದ ಸಂಕೇಶ್ವರಕ್ಕೆ ಬರುತ್ತಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಮಗುಚಿ ಬಿದ್ದಿದೆ.
ಗಾಯಗೊಂಡವರನ್ನು ಹುಕ್ಕೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅತಿ ವೇಗ ಮತ್ತು ನಿಷ್ಕಾಳಜಿತನದಿಂದ ಬಸ್ ಚಲಾಯಿಸಿದ್ದೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ಸ್ಥಳಕ್ಕೆ ಹುಕ್ಕೇರಿ ಪೋಲಿಸರು ಆಗಮಿಸಿ ರಸ್ತೆ ಸಂಚಾರ ಸುಗಮ ಗೊಳಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.




