Kannada NewsKarnataka NewsLatest

*ಬರೋಬ್ಬರಿ 18 ಕೋಟಿ ಹಣ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹೊತ್ತಲ್ಲೇ ಧಾರವಾಡದ ಅಪಾರ್ಟ್ ಮೆಮ್ಟ್ ಒಂದರಲ್ಲಿ ಬರೋಬ್ಬರಿ 18 ಕೋಟಿ ಹಣ ಪತ್ತೆಯಾಗಿದೆ.

ಉದ್ಯಮಿ ಯು.ಬಿ.ಶೆಟ್ಟಿ ಅವರ ಅಕೌಂಟೆಂಟ್ ಬಸವರಾಜ್ ದತ್ತು ಎಂಬುವವರ ಮನೆಯಲ್ಲಿ 18 ಕೋಟಿ ರೂಪಾಯಿ ಹಣ ಪತ್ತೆಯಾಗಿದ್ದು, ಚುನಾವಣಾ ಅಧಿಕಾರಿಗಳು ಬ್ಯಾಗ್ ಗಳಲ್ಲಿ ಹಣ ತುಂಬಿ ಹುಬ್ಬಳ್ಳಿಗೆ ತಂದಿದ್ದಾರೆ.

ಹುಬ್ಬಳ್ಳಿಯ ಕೇಶ್ವಾಪುರದಲ್ಲಿರುವ ಎಸ್ ಬಿಐ ಮೂಲಕ ಐಟಿ ಖಾತೆಗೆ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಚುನಾವಣಾ ವೀಕ್ಷಣ ದಳದ ಅಧಿಕಾರಿಗಳು ಮನೆ ಮೇಲೆ ದಾಳಿ ನಡೆಸಿ ಈ ಹಣವನ್ನು ವಶಕ್ಕೆ ಪಡೆದಿದ್ದಾರೆ. 18 ಕೋಟಿ ಬೃಹತ್ ಹಣದ ಬಗ್ಗೆ ತನಿಖೆ ನಡೆಸಲಾಗಿದೆ.

Home add -Advt


Related Articles

Back to top button