Kannada NewsKarnataka NewsLatest

ರಾಮಮಂದಿರ ನಿರ್ಮಾಣಕ್ಕೆ 2 ಲಕ್ಷ ರೂ. ಸಮರ್ಪಿಸಿದ ಲಕ್ಷ್ಮಿ ಹೆಬ್ಬಾಳಕರ್

ವಿಶ್ವಹಿಂದೂ ಪರಿಷತ್ ಪ್ರಮುಖರಿಗೆ ಚೆಕ್ ಹಸ್ತಾಂತರ

ಪ್ಬೆರಗತಿವಾಹಿನಿ ಸುದ್ಳದಿ,ಗಾವಿ  – ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಾಣಕ್ಕೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ 2 ಲಕ್ಷ ರೂ. ನಿಧಿ ಸಮರ್ಪಿಸಿದ್ದಾರೆ.
ಮಂಗಳವಾರ ನಿಧಿ ಸಂಗ್ರಹಕ್ಕೆ ಬಂದ ವಿಶ್ವಹಿಂದೂ ಪರಿಷತ್ ಪ್ರಮುಖರಿಗೆ ಲಕ್ಷ್ಮಿ ಹೆಬ್ಬಾಳಕರ್ ಮತ್ತು ಅವರ ಸಹೋದರ ಚನ್ನರಾಜ ಹಟ್ಟಿಹೊಳಿ 2 ಲಕ್ಷ ರೂ. ಚೆಕ್ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ವಿದ್ಯಾಭಾರತಿ ಕರ್ನಾಟಕ ಪ್ರಾಂತ ಅಧ್ಯಕ್ಷ ಪರಮೇಶ್ವರ ಹೆಗಡೆ, ವಿಶ್ವಹಿಂದೂ ಪರಿಷತ್ ಸಹಕೋಶಾಧ್ಯಕ್ಷ ಕೃಷ್ಣ ಭಟ್, ಜಿಲ್ಲಾ ವ್ಯವಸ್ಥಾ ಪ್ರಮುಖ ವಿಶಾಲ ಖಂಡಾಗಳೆ​, ನಗರ ಸಹಸೇವಾ ಪ್ರಮುಖ ದಿನೇಶ್ ಪಾಟೀಲ, ನಗರ ಸಂಪರ್ಕ ಪ್ರಮುಖ ಗುರುದತ್ತ ಕುಲಕರ್ಣಿ, ನಗರ ಕಾರ್ಯವಾಹ ವಿನೋದ ಶಾನಭಾಗ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಡಿವೇಶ ಇಟಗಿ ಮೊದಲಾದವರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button