Kannada NewsKarnataka NewsLatest

*ಮಹಡಿಯಿಂದ ಕೆಳಗೆ ಬಿದ್ದು 2 ವರ್ಷದ ಮಗು ದಾರುಣ ಸಾವು*

ಪ್ರಗತಿವಾಹಿನಿ ಸುದ್ದಿ: ಸಂಬಂಧಿಕರ ಮನೆಗೆ ಬಂದಿದ್ದಾಗ ಘೋರ ದುರಂತ ಸಂಭವಿಸಿದೆ. ಮನೆಯಲ್ಲಿ ಆಟವಾಡುತ್ತಿದ್ದ ಮಗು ಮೊದಲನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿರುವ ದಾರುಭ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ಈ ಘಟನೆ ನಡೆದಿದೆ. 2 ವರ್ಷದ ದೀಕ್ಷಿತ್ ಮೃತ ಮಗು. ಮಗು ಕೆಳಗೆ ಬಿದ್ದ ಹೊಡೆತಕ್ಕೆ ಕೋಮಾಗೆ ಜಾರಿದ್ದು, 24 ಗಂಟೆಗಳ ಕಾಲ ಕೋಮಾದಲ್ಲಿದ್ದ ದೀಕ್ಷಿತ್ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ.

Home add -Advt

ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಾಸರಹಳ್ಳಿಯ ನವೀನ್ ಕುಮಾರ್, ಕಾವ್ಯ ದಂಪತಿ ಮತ್ತು ಮಗು ದೀಕ್ಷಿತ್ ಎರಡು ದಿನಗಳ ಹಿಂದೆ ಸಂಬಂಧಿಕರ ಮನೆಗೆ ಬಂದಿದ್ದರು. ಈ ವೇಳೆ ಆಟವಾಡುತ್ತಿದ್ದಾಗ ಕಟ್ಟಡದ ಮೊದಲ ಮಹಡಿಯಿಂದ ಕೆಳಗೆ ಬಿದ್ದು ಈ ದುರಂತ ಸಂಭವಿಸಿದೆ.

Related Articles

Back to top button