ಏಕಾಏಕಿ ಹೊತ್ತಿ ಉರಿದ ಬಸ್ : 22 ಪ್ರಯಾಣಿಕರು ಪವಾಡ ಸದೃಶ ಪಾರು

ಪ್ರಗತಿವಾಹಿನಿ ಸುದ್ದಿ, ಯಲ್ಲಾಪುರ –  ಸಂಚರಿಸುತ್ತಿದ್ದ ಬಸ್ ಏಕಾ ಏಕಿ ಹೊತ್ತಿ ಉರಿದಿದ್ದು, ಪ್ರಯಾಣಿಕರು ಪವಾಡಸದೃಶ ಪಾರಾಗಿದ್ದಾರೆ.

ಮುಂಬೈ ನಿಂದ ಮಂಗಳೂರಿಗೆ ಹೊರಟಿದ್ದ ಬಸ್ ರಾಷ್ಟೀಯ ಹೆದ್ದಾರಿ 63 ರಲ್ಲಿ ಹೋಗುವಾಗ ಬೆಂಕಿ ಹೊತ್ತಿಕೊಂಡಿತು. ಬಸ್ ನಲ್ಲಿ  22ಪ್ರಯಾಣಿಕರು ಪ್ರಯಾಣಿಸುತಿದ್ದರು. ಈ ವೇಳೆ ಬಸ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ತಗಲಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಜರಾಗಿ ಬೆಂಕಿ ನಂದಿಸಿದರು. ಯಲ್ಲಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮರಾಠಿ ಲಘು ಪದಾತಿ ದಳ ಕೇಂದ್ರದಲ್ಲಿ “ವಿಜಯ ದಿವಸ”: ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಗೌರವ ಸಮರ್ಪಣೆ

Home add -Advt

Related Articles

Back to top button